ದಾವಣಗೆರೆ: ಸಿಡಿಲು ಬಡಿದು ತಾಯಿ ಮಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಹರಪನಹಳ್ಳಿಯಲ್ಲಿ ತಾಲೂಕಿನ ಚನ್ನಹಳ್ಳಿ ತಾಂಡದಲ್ಲಿ ನಡೆದಿದ್ದು, ತಾಯಿ ಕವಿತಾಬಾಯಿ (29) ಹಾಗೂ ಪುತ್ರಿ ಪಲ್ಲವಿ (11) ಇಬ್ಬರು ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಮಳೆ ಬಂದ ಹಿನ್ನೆಲೆ ತಾಯಿ ಮಗಳು ಮನೆಗೆ ಬರುತ್ತಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ತಾಯಿ ಮಗಳು ಇಬ್ಬರು ಮೃತಪಟ್ಟಿದ್ದಾರೆ.










