ಕೊಪ್ಪ ತಾಲೂಕಿನ ನಾರ್ವೆ ಗ್ರಾಮದಲ್ಲಿ ಅಕ್ರಮ ಮರಳು ದಾಸ್ತಾನು ಅಡ್ಡೆಗಳ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರ ದಾಳಿ…

480
firstsuddi

ಚಿಕ್ಕಮಗಳೂರು : ಅಕ್ರಮ ಮರಳು ದಾಸ್ತಾನು ಅಡ್ಡೆಗಳ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು‌ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ನಾರ್ವೆ ಗ್ರಾಮದಲ್ಲಿ ನಡೆದಿದ್ದು, ಕೊಪ್ಪ ತಾಲೂಕಿನ ತಹಶೀಲ್ದಾರ್ ತನುಜ ನೇತೃತ್ವದಲ್ಲಿ‌ ಪೊಲೀಸರು ದಾಳಿ‌ ನಡೆಸಿ ಲಕ್ಷಾಂತರ ಮೌಲ್ಯದ 200 ಲೋಡ್ ಮರಳು, ಹಾಗೂ ಪಿಕ್ಅಪ್ ವಾಹನ ವಶಕ್ಕೆ ಪಡೆದಿದ್ದು, ಹರಿಹರಪುರ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.