ಮೈಸೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರ ಯೋಗಕ್ಷೇಮ ವಿಚಾರಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೊಂದು ದುಃಖದ ಘಟನೆ. ಘಟನೆ ಬಗ್ಗೆ ತನಿಖೆ ನಡೆಯಬೇಕು. ವೈಯಕ್ತಿಕ ಕಾರಣಗಳಿಂದ ಈ ರೀತಿಯ ಕೆಲಸ ಮಾಡಿದ್ದರೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೆಪಿಸಿಸಿ ಕಡೆಯಿಂದ ಮೃತರ ಕುಟುಂಬದವರಿಗೆ 1 ಲಕ್ಷ ಪರಿಹಾರ ಕೊಡಲು ನಿರ್ಧಾರ ಮಾಡಿದ್ದೇವೆ ಎಂದಿದ್ದಾರೆ.










