ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಈಗ ಚಿತ್ರರಂಗಕ್ಕೆ ಗುಡ್ ಬೈ ಹೇಳಿ ಊರಿನ ಕಡೆ ಗೆ ಹೋಗಲು ತೀರ್ಮಾನಿಸಿದ್ದು, ಬೆಂಗಳೂರಿನ ಯಾಂತ್ರಿಕ ಬದುಕು ಸಾಕಾಗಿದೆ. ವ್ಯವಸಾಯ ಕಾರ್ಯದಲ್ಲಿ ತೊಡಗುವ ನಿರ್ಧಾರ ಮಾಡಿದ್ದು,ತೋಟದಲ್ಲಿ ತೆಂಗಿನ ಸಸಿಗಳನ್ನು ನೆಟ್ಟು ಮಾದರಿ ರೈತನಾಗಬೇಕೆಂದು ಪ್ರಯತ್ನ ಮಾಡುತ್ತಿದ್ದೇನೆ. ಸಿನಿಮಾವೆಲ್ಲ ಬಿಟ್ಟು ಊರಿಗೆ ಹೋಗಲು ನಿರ್ಧರಿಸಿದ್ದೇನೆ ಎಂದು ಪ್ರಥಮ್ ತಿಳಿಸಿದ್ದಾರೆ. ಪ್ರಥಮ್ ಅವರ ಈ ನಿರ್ಧಾರಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.










