ಬೆಂಗಳೂರು: ಆಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ರಾಜ್ಯದಲ್ಲಿರುವ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಲುಗಾಡಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಇದೆ ಅಂತ ನನಗೆ ಅನ್ನಿಸೋದಿಲ್ಲ. ರಾಜ್ಯ ಬಿಜೆಪಿ ನಾಯಕರೇ ಇದನ್ನೆಲ್ಲ ಮಾಡ್ತಿದ್ದಾರೆ. ಕೇವಲ ಮೂರು ದಿನ ಮುಖ್ಯಮಂತ್ರಿಯಾಗಿರುವುದಕ್ಕೆ ಬಿ.ಎಸ್ ಯಡಿಯೂರಪ್ಪನವರಿಗೆ ಅಸಮಧಾನವಿದೆ. ಹೀಗಾಗಿ ರಾಜ್ಯ ಬಿಜೆಪಿ ನಾಯಕರಿಂದಲೇ ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಯತ್ನ ನಡೆಯುತ್ತಿದೆ ಎಂದಿದ್ದಾರೆ.










