ಚಿಕ್ಕಮಗಳೂರು :ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರ ಮೇಲೆ ದೌರ್ಜನ್ಯ ಹಿನ್ನೆಲೆ ಚಿಕ್ಕಮಗಳೂರು ಅಯ್ಯಪ್ಪ ಸ್ವಾಮಿ ಕ್ಷೇತ್ರ ರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಗಿದ್ದು, ನಗರದ ಓಂಕಾರೇಶ್ವರ ದೇವಾಸ್ಥಾನದಿಂದ ಅಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ಮಾಡಲಾಗಿದ್ದು, ಕೇರಳ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರತಿಭಟನೆಯಲ್ಲಿ ಅಯ್ಯಪ್ಪ ಭಕ್ತರು ಹಾಗೂ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.









