ದೆಹಲಿ: ಬೆಳಗಾವಿಯಲ್ಲಿ ಜಾರಕಿಹೊಳಿ ಬ್ರದರ್ಸ್ ಹಾಗೂ ಲಕ್ಷ್ಮಿ ಹೆಬ್ಬಾಲ್ಕರ್ ನಡುವಿನ ಜಟಾಪಟಿಗೆ ಸಂಬಂಧಿಸಿದಂತೆ ಮಾತನಾಡಿದ ಕೆ.ಪಿ.ಸಿ.ಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು ದೊಡ್ಡ ಪಕ್ಷದಲ್ಲಿ ಇಂತಹ ಸಮಸ್ಯೆಗಳು ಇರುತ್ತವೆ .ರಮೇಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಅವರು ಪಕ್ಷಕ್ಕೆ ತೊಂದರೆ ಕೊಡುವ ಕೆಲಸವನ್ನು ಮಾಡುವುದಿಲ್ಲ ಎಂದರು. ಇದೇ ವೇಳೆ ಪಕ್ಷಕ್ಕೆ ಮುಜುಗರವಾಗುವಂತಹ ಹೇಳಿಕೆಗಳನ್ನು ನೀಡದಂತೆ ಎಲ್ಲರಿಗೂ ಸೂಚನೆ ನೀಡಲಾಗಿದೆ ಎಂದು ದಿನೇಶ್ ಗುಂಡುರಾವ್ ದೆಹಲಿಯಲ್ಲಿ ತಿಳಿಸಿದ್ದಾರೆ.










