ಚಿಕ್ಕಮಗಳೂರು :ನಾಳೆ ಟಿಪ್ಟು ಸುಲ್ತಾನ್ ಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಾಗಿದೆ. ಟಿಪ್ಪು ಜಯಂತಿಗೆ ಜಿಲ್ಲೆಯಾದ್ಯಂತ ಪರ ವಿರೋಧ ವ್ಯಕ್ತವಾಗಿರುವುದ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಧಿಕಾರಿ ಶ್ರೀರಂಗಯ್ಯರವರು 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.










