ಹಿಸ್ಸಾರ್: ಎರಡು ಕೊಲೆ ಪ್ರಕರಣದ ಆರೋಪ ಹೊತ್ತಿದ್ದ ಸ್ವಯಂಘೋಷಿತ ದೇವಮಾನವ ರಾಮ್ಪಾಲ್ಗೆ ಇಂದು ಹರಿಯಾಣದ ಸ್ಥಳೀಯ ಕೋರ್ಟ್ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದ್ದು.2014ರ ನವೆಂಬರ್ 8ರಂದು ಬರ್ವಾಲದ ಸತ್ಲೋಕ್ ಆಶ್ರಮದಲ್ಲಿ ಮಹಿಳೆಯೊಬ್ಬರ ಅನುಮಾನಾಸ್ಪದ ಸಾವು ಹಾಗೂ 2014ರ ನವೆಂಬರ್ 19ರಂದು ರಾಮ್ಪಾಲ್ ನನ್ನು ಪೊಲೀಸರು ಬಂಧಿಸಲು ತೆರಳಿದ್ದಾಗ ಉಂಟಾದ ಗಲಭೆಯಲ್ಲಿ ನಾಲ್ವರು ಮಹಿಳೆಯರು ಮತ್ತು ಒಂದು ಮಗು ಮೃತಪಟ್ಟಿದ್ದ ಪ್ರಕರಣದಲ್ಲಿ ರಾಮ್ಪಾಲ್ಗೆ ಶಿಕ್ಷೆಯಾಗಿದೆ. ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಡಿ.ಆರ್. ಚಾಲಿಯಾ ಅವರು ತೀರ್ಪು ಪ್ರಕಟಿಸಿದ್ದಾರೆ.










