ಬೆಳಗಾವಿ: ಇಂದಿನಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಬೆಳಗಾವಿಯಲ್ಲಿ ನಡೆಯುತ್ತಿರುವ ಮೊದಲ ಅಧಿವೇಶನವಾಗಿದೆ. ಅಧಿವೇಶನದಲ್ಲಿ ರೈತರ ಸಾಲಮನ್ನಾ, ಬರ ಪರಿಹಾರ, ನೀರಾವರಿ,ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಲಿದೆ.










