ರಾಂಚಿ- ದೆಹಲಿಯ ಬುರಾರಿ ಕುಟುಂಬದ ಆತ್ಮಹತ್ಯೆ ಮಾದರಿಯಲ್ಲೇ ಜಾರ್ಖಂಡ್ ನ ರಾಜಧಾನಿ ರಾಂಚಿಯ ಕೊಂಕೆ ಪ್ರದೇಶದ ಮನೆಯೊಂದರಲ್ಲಿ ಒಂದೇ ಕುಟುಂಬದ ಏಳು ಮಂದಿ ಸಾಮೂಹಿಕ ಆತ್ಮಹತ್ಯೆ ಗೆ ಶರಣಾಗಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದ್ದು ,ಪೊಲೀಸರು ಪ್ರಾಥಮಿಕ ತನಿಖೆ ಮಾಹಿತಿ ಪ್ರಕಾರ ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ತನಿಖೆಯನ್ನು ಮುಂದುವರೆಸಿದ್ದು ,ಕೊಂಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










