ಹಾಸನ: ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಇಂದು ಮಧ್ಯಾಹ್ನದಿಂದ ಶಿರಾಡಿ ಘಾಟ್ ನಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರಿಂದಾಗಿ ಚಾರ್ಮಾಡಿ ಘಾಟ್ನಲ್ಲಿ ಉಂಟಾಗುತ್ತಿದ್ದ ಟ್ರಾಫಿಕ್ ಜಾಮ್ ಕಡಿಮೆಯಾಗುವ ನಿರೀಕ್ಷೆ ಇದ್ದು, ವಾಹನ ಸವಾರರಿಗೆ ಅನುಕೂಲವಾಗಲಿದೆ.