ಟಿಪ್ಪು ಜಯಂತಿ ಕುರಿತು ಸಿದ್ದರಾಮಯ್ಯ ಸರಣಿ ಟ್ವಿಟ್…

291
firstsuddi

ಬೆಂಗಳೂರು :ಟಿಪ್ಪು ಜಯಂತಿ ಆಚರಣೆ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವಿಟ್ ಮಾಡಿದ್ದು, ಟಿಪ್ಪು ಯುದ್ಧದ ವೇಳೆ ಜನರನ್ನು ಸಾಯಿಸಿದ್ದ ಲೂಟಿ ಮಾಡಿದ್ದ  ಎನ್ನುವುದು ವಿರೋಧಿಗಳ ಆರೋಪ. ಟಿಪ್ಪು ಕಾಲದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇರಲಿಲ್ಲ, ಟಿಪ್ಪು  ಪ್ರಜಾತಾಂತ್ರಿಕವಾಗಿ ಆಯ್ಕೆಯಾದವನ್ನಲ್ಲ. ಆತ ಒಬ್ಬ ರಾಜ. ಆ ಕಾಲದಲ್ಲಿ ಯುದ್ದಧರ್ಮಕ್ಕೆ ತಕ್ಕಂತೆ ನಡೆದುಕೊಂಡಿದ್ದ.ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ, ಒಂದು ಸಂಸ್ಥಾನದ ರಾಜ ಎನ್ನುವ ವಾದ ಹುಟ್ಟಿಕೊಂಡಿದೆ.ಇಂತಹ ಮೊಂಡುವಾದದವರು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ,ವೀರ ಸಿಂಧೂರ ಲಕ್ಷ್ಮಣ,ರಾಣಿ ಅಬ್ಬಕ್ಕದೇವಿ ಸೇರಿದಂತೆ ಬ್ರಿಟಿಷರ ವಿರುದ್ದ ಹೋರಾಡಿ ಪ್ರಾಣಾರ್ಪಣೆ ಮಾಡಿದವರನ್ನು ಯಾವ ಗುಂಪಿಗೆ ಸೇರಿಸುತ್ತಾರೆ?ರಾಜ್ಯ ಸರ್ಕಾರ ಆಚರಿಸುತ್ತಿರುವುದು ಯಾವುದೇ ಒಂದು ಧರ್ಮಕ್ಕೆ ಸೇರಿದ ನಾಯಕನ ಜಯಂತಿಯಲ್ಲ. ಒಬ್ಬ ದೇಶಪ್ರೇಮಿ, ಜಾತ್ಯತೀತ, ಮತ್ತು ಜನಪರ ಅರಸನಾಗಿದ್ದ ಟಿಪ್ಪುವಿನ ಜಯಂತಿ ಆಚರಿಸುತ್ತಿದ್ದೇವೆ. ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹ ಟಿಪ್ಪು ಬಗ್ಗೆ ತಿಳಿದುಕೊಳ್ಳಬೇಕಾಗಿರುವುದು ವೈರಿಗಳಾಗಿದ್ದ ಬ್ರಿಟಿಷ್ ಇತಿಹಾಸಕಾರರಿಂದಲ್ಲ. ಟಿಪ್ಪು ಬಗ್ಗೆ ಮೈಸೂರು ಭಾಗದಲ್ಲಿ  ಲಾವಣಿಗಳಿವೆ. ಅವುಗಳಲ್ಲಿ ಟಿಪ್ಪುವಿನ ದೇಶಪ್ರೇಮ,ಜಾತ್ಯತೀತ ಧೋರಣೆ,ಅಭಿವೃದ್ದಿಯ ಕಲ್ಪನೆಗಳ ಮಾಹಿತಿ ಇದೆ. ಈ ಲಾವಣಿ, ಪದ,ಹಾಡುಗಳೇ ನಿಜವಾದ ಇತಿಹಾಸ ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯ ಸಂಪ್ರದಾಯವನ್ನು ಹಿಂದಿನ ನಮ್ಮ ಸರ್ಕಾರ ಹುಟ್ಟುಹಾಕಿದ್ದಲ್ಲ, ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಜಯಂತಿ ಆಚರಣೆ ಪಟ್ಟಿಗೆ ಇನ್ನಷ್ಟು ಹೆಸರುಗಳನ್ನು ಸೇರಿಸುತ್ತಾ ಬಂದಿವೆ.ಆಗ ಕಾಣಿಸಿಕೊಳ್ಳದ ಪ್ರತಿರೋಧ ಟಿಪ್ಪು ಆಚರಣೆ ಬಗ್ಗೆ ಮಾತ್ರ ಯಾಕೆ?ಸರ್ಕಾರವೇ ಜಯಂತಿಗಳನ್ನು ಆಚರಿಸುವುದಕ್ಕೆ ಕಾರಣವಿದೆ. ಇದನ್ನು ಸಾರ್ವಜನಿಕರಿಗೆ ಬಿಟ್ಟರೆ ತಮ್ಮ ಜಾತಿ-ಧರ್ಮಗಳಿಗೆ ಸೇರಿರುವ ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯನ್ನಷ್ಟೇ ಮಾಡಿ ಅವರನ್ನು ತಮ್ಮ ಜಾತಿ-ಧರ್ಮಗಳಿಗೆ ಸೀಮಿತಗೊಳಿಸುತ್ತಾರೆ. ಇದು ಮಹಾನ್ ವ್ಯಕ್ತಿಗಳಿಗೆ ಅಗೌರವವೂ ಹೌದು ಎಂದು ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿದ್ದಾರೆ.