ಮೋದಿ ಸರ್ಕಾರದಲ್ಲಿ ಐಟಿ ಇಲಾಖೆಯ ಕಾರ್ಯಶೈಲಿಯನ್ನು ಗಮನಿಸಿದರೆ ದುರುದ್ದೇಶ ಇರಬಹುದೆಂಬ ಅನುಮಾನ:ಸಿದ್ದರಾಮಯ್ಯ ಟ್ವಿಟ್…

239
firstsuddi

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ ಮೂಲಕ ತೆರಿಗೆ ಪಾವತಿಯಲ್ಲಿ ವ್ಯತ್ಯಾಸವಾಗಿದ್ದರೆ ಸಂಬಂಧಿತ ಲೆಕ್ಕಪತ್ರಗಳ ಪರಿಶೀಲನೆ ನಡೆಸುವ  ಅಧಿಕಾರ ಐಟಿ ಇಲಾಖೆಗೆ ಇದೆ.‌ ಅದನ್ನು  ಗೌರವಿಸೋಣ. ಆದರೆ ಮೋದಿ ಸರ್ಕಾರದಲ್ಲಿ ಐಟಿ ಇಲಾಖೆಯ ಕಾರ್ಯಶೈಲಿಯನ್ನು ಗಮನಿಸಿದರೆ ಅದು ನಡೆಸುತ್ತಿರುವ ದಾಳಿಯ ಹಿಂದೆ ದುರುದ್ದೇಶ ಇರಬಹುದೆಂಬ ಅನುಮಾನ ಮೂಡುತ್ತಿದೆ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.