ಜಮ್ಮು-ಕಾಶ್ಮೀರ: ಜಮ್ಮು-ಶ್ರೀನಗರ ಹೆದ್ದಾರಿ ಬನಿಹಾಲ್ ನಲ್ಲಿ ಸಿಆರ್ಪಿಎಫ್ ವಾಹನವಿದ್ದ ಸ್ವಲ್ಪ ದೂರದಲ್ಲಿ ಕಾರೊಂದು ಸ್ಫೋಟಗೊಂಡಿದ್ದು, ಸ್ಫೋಟದ ಬಳಿಕ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಕಾರಿನಲ್ಲಿದ್ದ ಸಿಲಿಂಡರ್ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿದೆ ಎನ್ನಲಾಗಿದ್ದು, ಮತ್ತೊಂದೆಡೆ ಪುಲ್ವಾಮಾ ಮಾದರಿ ದಾಳಿ ನಡೆಸಲು ಉಗ್ರರು ಯತ್ನಿಸಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.










