ಶೀಘ್ರದಲ್ಲೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗುವುದು.- ಡಾ.ಜಿ ಪರಮೇಶ್ವರ್…

329
firstsuddi

ಬೆಂಗಳೂರು –ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿಲ್ಲ. ಬದಲಾಗಿ ಲೋಕಸಭಾ ಚುನಾವಣೆಯ ತಯಾರಿ ಬಗ್ಗೆ ಚರ್ಚೆ ನಡೆದಿದ್ದು, ಸರ್ಕಾರದಲ್ಲಿರುವ ಗೊಂದಲಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಖಾಲಿ ಇರುವ ಆರು ಖಾತೆಯನ್ನು ಸದ್ಯದಲ್ಲೆ ತುಂಬುತ್ತೇವೆ ಹಾಗೂ ಶೀಘ್ರದಲ್ಲೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವನ್ನು ಮಾಡಲಾಗುತ್ತದೆ. ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.