ಹುಬ್ಬಳ್ಳಿ: ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ದಲೈ ಲಾಮಾ ಅವರ ಹತ್ಯೆಗೆ ಸಂಚು ರೂಪಿಸಿರುವ ಪ್ರಕರಣವನ್ನು ಖಂಡಿಸುತ್ತೇನೆ. ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಸಂಚು ರೂಪಿಸಿರುವುದು ಆಘಾತಕಾರಿ ಬೆಳವಣಿಗೆ. ಉಗ್ರಗಾಮಿಗಳ ಸಂಚಿನ ಬಗ್ಗೆ ಸಮರ್ಪಕವಾದ ತನಿಖೆಯಾಗಬೇಕು ರಾಜ್ಯ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದ್ದು, ಗುಪ್ತಚರ ಇಲಾಖೆಯನ್ನು ಬಲಪಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದಿದ್ದಾರೆ.










