ನವದೆಹಲಿ: ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ ಮುಂದುವರೆದಿದ್ದು, 10 ಲಕ್ಷಕ್ಕೂ ಹೆಚ್ಚು ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಬ್ಯಾಂಕ್ ಆಫ್ ಬರೋಡಾದೊಂದಿಗೆ ದೇನಾ ಬ್ಯಾಂಕ್ ಹಾಗೂ ವಿಜಯ ಬ್ಯಾಂಕ್ ವಿಲೀನಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಹಲವು ಬ್ಯಾಂಕ್ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಿವೆ. ಬ್ಯಾಂಕ್ ಸೇವೆ ಇಂದು ಕೂಡ ಲಭ್ಯವಿರುವುದಿಲ್ಲ.










