ಮೂಡುಬಿದಿರೆ: ಯುವತಿಗೆ ಚಾಕುವಿನಿಂದ ಇರಿದು ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯ ಪ್ರಾಂತ್ಯ ಗ್ರಾಮದಲ್ಲಿ ನಡೆದಿದ್ದು, ಲೋಹಿತ್(21) ಎಂಬುವವನು ಚರಿಷ್ಮ(20) ಎಂಬಾಕೆಯನ್ನು ಪ್ರೀತಿಸುತ್ತಿದ್ದು, ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಇಂದು ಮಧ್ಯಾಹ್ನ ಲೋಹಿತ್ ಯುವತಿಗೆ ಚಾಕುವಿನಿಂದ ಇರಿದಿದ್ದು, ಬಳಿಕ ಯುವಕ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಯಗೊಂಡ ಚರಿಷ್ಮನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










