ತುಮಕೂರು: ಜನವರಿ 31 ಅಂದರೆ ನಾಳೆ ಡಾ. ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ಹಿನ್ನಲೆ ಶ್ರೀಗಳ ಪುಣ್ಯಸ್ಮರಣೆಗೆ ರಾಜ್ಯದೆಲ್ಲೆಡೆಯಿಂದ ಭಕ್ತರು ಅನ್ನದಾಸೋಹಕ್ಕೆ ಬೇಕಾದ ದಿನಸಿ ಸಾಮಾಗ್ರಿಗಳನ್ನು ಮಠಕ್ಕೆ ನೀಡುತ್ತಿದ್ದಾರೆ. ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ 5 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ಸಾಧ್ಯತೆ ಇದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಮಾಡುವ ಸಾಧ್ಯತೆ ಇದೆ.










