ಹಾಸನ: ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ತೊಂದರೆ ಕೊಟ್ಟರೆ ನಾನು ಸುಮ್ಮನಿರುವುದಿಲ್ಲ. ಬಿಜೆಪಿ ವಿರುದ್ಧ ದಂಗೆ ಏಳುವಂತೆ ರಾಜ್ಯದ ಜನರಿಗೆ ಕರೆ ಕೊಡುತ್ತೇನೆ. ನಾವು ರೈತರ ಸಮಸ್ಯೆಗಳನ್ನ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ ಪ್ರತಿದಿನ ಕೀಳುಮಟ್ಟದ ರಾಜಕಾರಣ ನೋಡುವುದೇ ಆಗಿದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.










