ಹುಬ್ಬಳ್ಳಿ: ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯುತ್ತದೆ. ನಾವು ಸಲಹೆ ಸೂಚನೆಗಳನ್ನೂ ಮಾತ್ರ ನೀಡುತ್ತೇವೆ. ನಮ್ಮಲ್ಲಿ ಸಚಿವ ಸಂಪುಟದ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ದೇವೆಗೌಡರು, ರೇವಣ್ಣ ಯಾವ ಅರ್ಥದಲ್ಲಿ ಸಂಪುಟದ ಬಗ್ಗೆ ಅಸಮಾಧಾನ ಇದೆ ಎಂದು ಹೇಳಿದ್ದಾರೆ ಗೊತ್ತಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಬಗ್ಗೆ ಈ ತಿಂಗಳು ಸಭೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ. .










