ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕರ್ನಾಟಕ ಏಕೆ ಅಭಿವೃದ್ಧಿಯಾಗಲಿಲ್ಲ?- ಹೆಚ್.ಡಿ ರೇವಣ್ಣ.

313
firstsuddi

ಹಾಸನ- ಯಡಿಯೂರಪ್ಪ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಹೆಚ್.ಡಿ ರೇವಣ್ಣ ಸಮಸ್ಯೆಗಳಿದ್ದರೆ ಅದನ್ನು ಮುಖ್ಯಮಂತ್ರಿ ಬಳಿ ಚರ್ಚಿಸಲಿ. ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರದಲ್ಲಿ ಬಿಜೆಪಿ ಆಡಳಿವನ್ನು ನಡೆಸುತ್ತಿದ್ದು, ಉತ್ತರ ಕರ್ನಾಟಕ್ಕೆ ಯಡಿಯೂರಪ್ಪ ಅವರು ಏಕೆ ಅನುದಾನವನ್ನು ಕೊಡಿಸಲಿಲ್ಲ? ಹಾಗೂ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕರ್ನಾಟಕ ಏಕೆ ಅಭಿವೃದ್ಧಿಯಾಗಲಿಲ್ಲ? ಎಂದು ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಾರೆ.