ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಿಸಿರುವುದಕ್ಕೆ ಸಂಬಂಧಿಸಿದಂತೆ ಬುಧವಾರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಾಧೀಶರಾದ ಆರ್.ಎಫ್.ನಾರಿಮನ್, ಎ.ಎಂ.ಖಾನ್ವಿಲ್ಕರ್, ಡಿ.ವೈ.ಚಂದ್ರಚೂಡ ಅವರಿದ್ದ ಸಂವಿಧಾನ ಪೀಠ ಆದೇಶಿಸಿದ್ದು. ದೇವಾಸ್ಥಾನಕ್ಕೆ ಮಹಿಳೆಯರನ್ನು ನಿಷೇಧಿಸುವುದು ಸಂವಿಧಾನದ ಆಶಯಗಳಿಗೆ ವಿರುದ್ದವಾಗಿದೆ. ಹಾಗೂ ಶಬರಿಮಲೆ ದೇವಸ್ಥಾನದ ಪ್ರವೇಶಕ್ಕೆ ಮಹಿಳೆಯರಿಗೆ ನಿರ್ಬಂಧ ಹೇರುವಂತಿಲ್ಲ ಎಂಬ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಹೊರಡಿಸಿದೆ.










