ತಿರುವನಂತಪುರಂ: ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ 40 ವರ್ಷದ ಬಿಂದು ಮತ್ತು ಕನಕದುರ್ಗ ಎನ್ನುವ ಇಬ್ಬರು ಮಹಿಳೆಯರು ಇಂದು ಮುಂಜಾನೆ 3-30ರ ಸುಮಾರಿಗೆ ದೇವಾಲಯ ಪ್ರವೇಶಿಸಿದ ಹಿನ್ನಲೆ ತಾತ್ಕಾಲಿಕವಾಗಿ ದೇವಾಲಯವನ್ನು ಬಂದ್ ಮಾಡಿದ್ದಾರೆ. ಅರ್ಚಕರ ನೇತೃತ್ವದಲ್ಲಿ ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ಶುದ್ಧೀಕರಣ ಕಾರ್ಯಗಳು ಆರಂಭಗೊಂಡಿದ್ದು, ಶುದ್ದೀಕರಣದ ಬಳಿಕ ದೇವಾಲಯವನ್ನು ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ.










