ಅಗ್ನಿಪಥ್ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣಗಳಿಲ್ಲ : ದೆಹಲಿ ಹೈಕೋರ್ಟ್.

69
firstsuddi

ನವದೆಹಲಿ : ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಶಸ್ತ್ರ ಪಡೆಗಳು ಸುಸಜ್ಜಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣಗಳಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ. ನ್ಯಾಯಾಲಯವು ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣವನ್ನು ಕಂಡುಕೊಳ್ಳುವುದಿಲ್ಲ ಎಂದು ಹೇಳಿ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ. ಅಲ್ಲದೇ ನೇಮಕಾತಿಗಾಗಿ ಜಾಹೀರಾತುಗಳಿಂದ ಯಾವುದೇ ಪ್ರಾಮಿಸರಿ ಎಸ್ಟೊಪೆಲ್ ಅಥವಾ ಕಾನೂನುಬದ್ಧ ನಿರೀಕ್ಷೆಯನ್ನು ಸೃಷ್ಟಿಸಲಾಗಿಲ್ಲ ಎಂದು ಪೀಠ ಹೇಳಿದೆ.

ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ದೇಶಾದ್ಯಂತ ಹೈಕೋರ್ಟ್ ಗಳಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿತ್ತು ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಲಾಯಿತು. ನಂತರ ಸುಪ್ರೀಂ ಕೋರ್ಟ್ ಈ ಎಲ್ಲಾ ವಿಷಯಗಳನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಿತ್ತು.