ಬೆಂಗಳೂರು : ಕೊರೊನಾ ಆರ್ಭಟ ಜೋರಾಗಿದ್ದು, ಲಾಕ್ ಡೌನ್ ಜಾರಿ ಮಾಡಲಾಗಿದೆ. ಹೀಗಾಗಿ ಝೂನಲ್ಲಿರುವ ಪ್ರಾಣಿ, ಪಕ್ಷಿಗಳ ನಿರ್ವಹಣೆ ಕಷ್ಟವಾಗಿದೆ. ಈ ಕಾರಣಕ್ಕಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇತ್ತೀಚಿಗೆ ಪ್ರಾಣಿಗಳನ್ನು ದತ್ತು ಪಡೆಯುವಂತೆ ಮನವಿ ಮಾಡಿಕೊಂಡಿದ್ದರು. ಇವರ ಮನವಿಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಇದೀಗ ರಿಯಲ್ ಸ್ಟಾರ್ ಉಪೇಂದ್ರ ಅವರು ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಿಂದ ಆಫ್ರಿಕನ್ ಆನೆಯೊಂದನ್ನು ದತ್ತು ಪಡೆದಿದ್ದಾರೆ. ಈ ಮೂಲಕ ದರ್ಶನ್ ಅವರ ಕಾರ್ಯಕ್ಕೆ ಉಪ್ಪಿ ಕೈ ಜೋಡಿಸಿದ್ದಾರೆ.
ಪ್ರಾಣಿಗಳೇ ಗುಣದಲಿ ಮೇಲು, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಕರೆಯಂತೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಘಾಲಯ ದಿಂದ ಆಫ್ರಿಕನ್ ಆನೆ ಒಂದನ್ನು ದತ್ತು ಪಡೆದು ಈ ಮೂಲಕ ದರ್ಶನ್ ರವರ ಮಹತ್ಕಾರ್ಯಕ್ಕೆ ಕೈಜೋಡಿಸಿದ್ದೇವೆ ಎಂದು ಉಪೇಂದ್ರ ಅವರು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಪ್ರಾಣಿಗಳೇ ಗುಣದಲಿ ಮೇಲು….
ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಕರೆಯಂತೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಘಾಲಯ ದಿಂದ ಆಫ್ರಿಕನ್ ಆನೆ ಒಂದನ್ನು ದತ್ತು ಪಡೆದು ಈ ಮೂಲಕ ದರ್ಶನ್ ರವರ ಮಹತ್ಕಾರ್ಯಕ್ಕೆ ಕೈಜೋಡಿಸಿದ್ದೇವೆ.
-ನಿಮ್ಮ ಉಪೇಂದ್ರ pic.twitter.com/RB2PhyNnhN— Upendra (@nimmaupendra) June 10, 2021
ಇನ್ನೂ ಉಪೇಂದ್ರ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ದರ್ಶನ್, ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಆಫ್ರಿಕನ್ ಆನೆ ದತ್ತು ಪಡೆದ ಶ್ರೀ ಉಪೇಂದ್ರ ಅವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.










