ಉಳ್ಳಾಲ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರ ಮೇಲೆ ಚೂರಿ ಇರಿತ…

124
firstsuddi

ಉಳ್ಳಾಲ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರ ಮೇಲೆ ಇನ್ನೊಂದು ಬೈಕಿನಲ್ಲಿ ಬಂದ ತಂಡವೊಂದು ಅಪಘಾತ ನಡೆಸಿ, ಇಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿ ಎಂಬಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಸೇವಂತಿಗುಡ್ಡೆ ನಿವಾಸಿ ಆದಿತ್ಯ (23) ಮತ್ತು ಪಂಡಿತ್ ಹೌಸ್ ನಿವಾಸಿ ಪವನ್ (27) ಚೂರಿ ಇರಿತಕ್ಕೊಳಗಾದವರು. ಆದಿತ್ಯ ಮತ್ತು ಪವನ್ ಅವರು ಕ್ಯಾಟ್ರಿಂಗ್ ನಲ್ಲಿ ಕೆಲಸಕ್ಕಿದ್ದ ಸ್ನೇಹಿತನನ್ನು ಕರೆ ತರಲು ಕುತ್ತಾರ್ ನಿಂದ ಅಂಬ್ಲಮೊಗರು ಕಡೆ ಶುಕ್ರವಾರ ರಾತ್ರಿ ಹೋಗುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕೃಷ್ಣ ಕೋಡಿ ಬಳಿ ಹಿಂಬದಿಯಿಂದ ಬಂದ ಅಪರಿಚಿತ ಬೈಕ್, ಇವರಿದ್ದ ಬೈಕ್ ಗೆ ಢಿಕ್ಕಿ ಹೊಡೆದು ಬಳಿಕ ಇಬ್ಬರಿಗೂ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ. ಗಾಯಾಳುಗಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.