ಮಂಗಳೂರು : ಕರಾವಳಿಯಲ್ಲಿ ನಿನ್ನೆ ಸಂಜೆಯಿಂದ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೆಲವೆಡೆ ಬಾರಿ ಮಳೆಯಾಗಿದ್ದು, ಅರಬ್ಬಿ ಸಮುದ್ರದಲ್ಲಿ ಒತ್ತಡ ಉಂಟಾದ ಪರಿಣಾಮ ಕರಾವಳಿ, ಉಡುಪಿ, ಚಿಕ್ಕಮಗಳೂರು, ಸಕಲೇಶಪುರ, ಮಡಿಕೇರಿ ಸೇರಿದಂತೆ ಮುಂದಿನ ಮೂರು ದಿನಗಳು ಬಾರಿ ಮಳೆಯಾಗಲಿದ್ದು, 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.










