ನವದೆಹಲಿ : ಕಾವೇರಿ ನೀರಿನ ವಿಚಾರದಲ್ಲಿ ಜೂನ್ ತಿಂಗಳಿನಿಂದ ತಮಿಳುನಾಡಿಗೆ 9.25 ಟಿಎಂಸಿ ನೀರನ್ನು ಬಿಡಬೇಕು ಎಂದು ತಮಿಳುನಾಡು ಸರ್ಕಾರ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದು, ಎರಡೂ ರಾಜ್ಯಗಳ ವಾದಗಳನ್ನು ಪರಿಗಣಿಸಿ ದೆಹಲಿಯ ಜಲಮಂಡಳಿ ಕಚೇರಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯನ್ನು ನಡೆಸಿ ತಮಿಳುನಾಡಿಗೆ 9.19 ಟಿಎಂಸಿ ನೀರನ್ನು ಬಿಡಬೇಕು ಎಂದು ಆದೇಶ ಹೊರಡಿಸಿದೆ.










