ಗಂಡ ಹೆಂಡತಿ ನಡುವಿನ ಗಲಾಟೆಗೆ 5 ವರ್ಷದ ಮಗಳು ಬಲಿ.

37

ಚಿಕ್ಕಮಗಳೂರು: ಸೆಪ್ಟೆಂಬರ್ 19 ರಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದಲ್ಲಿ ಐದು ವರ್ಷದ ಮಗುವಿನ ಶವ ಪತ್ತೆಯಾಗಿತ್ತು. ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಲಾಗಿದೆ ಎಂದು ಸ್ವತಃ ತಂದೆಯೇ ಹೇಳಿದ್ದನು. ಇದೀಗ, ಪೊಲೀಸ್ ತನಿಖೆ ವೇಳೆ ಸತ್ಯ ಬಯಲಾಗಿದೆ. ಕೊಲೆಗಾರ ಯಾರು ಅಂತ ಗೊತ್ತಾಗಿದೆ. ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಂದೆಯಿಂದಲೇ ಬಾಲಕಿ ಕೊಲೆಯಾಗಿದ್ದಾಳೆ ಎಂಬ ವಿಚಾರ ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ. ಮಗಳನ್ನು ಹತ್ಯೆಗೈದ ತಂದೆ ಮಂಜುನಾಥ್‍ನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಜುನಾಥ್ ಹೆಂಡತಿ ಮೇಲೆ ಅನೈತಿಕ ಸಂಬಂಧದ ಅನುಮಾನ ಹೊಂದಿದ್ದನು. ಇದೇ ಅನುಮಾನದಲ್ಲಿ ಮಂಜುನಾಥ್ ನಿತ್ಯವೂ ಕುಡಿದು ಬಂದು, ಮನೆಯಲ್ಲಿ ಗಲಾಟೆ ಮಾಡುತ್ತಿದ್ದನು. ಇದೇ ಸೆಪ್ಟೆಂಬರ್ 19 ರಂದು ಕುಡಿದು ಮಧ್ಯಾಹ್ನ ಮನೆಗೆ ಬಂದ ಮಂಜುನಾಥ್‍ನನ್ನು ಐದು ವರ್ಷದ ಮಗಳು ಪ್ರಶ್ನಿಸಿದ್ದಾಳೆ. ಇದರಿಂದ ಕ್ರೋಧಗೊಂಡ ಮಂಜುನಾಥ್ ಕೊಳಪೆಯಿಂದ ಮಗಳ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.