ಚಿಕ್ಕಮಗಳೂರು : ಮಹಾಮಾರಿ ಕೊರೊನಾ ವೈರಸ್ ಜಿಲ್ಲೆಯ ಜನಪ್ರತಿನಿಧಿಗಳನ್ನು ಬೆಂಬಿಡದೆ ಕಾಡುತ್ತಿದ್ದು, ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಅವರಿಗೆ ಕೊರೊನಾ ಸೋಂಕು ದೃಢವಾಗಿರುವ ಬೆನ್ನಲ್ಲೇ ಇಂದು ಮತ್ತೋರ್ವ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಅವರಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಜಿಲ್ಲೆಯ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಲ್ಲಿ ಆತಂಕ ಹೆಚ್ಚಾಗಿದೆ.










