ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ವಿಚಾರಕ್ಕೆ ಸಂಬಂಧಿಸಿ ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಹಲವು ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ. ಸ್ಯಾಂಡಲ್ವುಡ್ ಕೂಡ ಬಂದ್ಗೆ ಬೆಂಬಲಸಿದೆ. ನಾಳೆ ನಟ ಶಿವರಾಜ್ಕುಮಾರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ.
ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿ, ನಾಳೆಯ ಹೋರಾಟಕ್ಕೆ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಈ ಮನವಿ ಯಶಸ್ವಿ ಆಗಿದೆ.
ನಾಳೆಯ ಪ್ರತಿಭಟನೆಯಲ್ಲಿ ಶಿವಣ್ಣ, ಧ್ರುವ ಸರ್ಜಾ, ಉಪೇಂದ್ರ, ರಾಘಣ್ಣ, ನೆನಪಿರಲಿ ಪ್ರೇಮ್, ಅಜಯ್ ರಾವ್, ಪ್ರಜ್ವಲ್ ದೇವರಾಜ್, ರಂಗಾಯಣ ರಘು, ಸಾಧು ಕೋಕಿಲಾ ಸೇರಿದಂತೆ ಕಿರುತೆರೆ ನಟ- ನಟಿಯರು ಭಾಗಿಯಾಗುವ ಸಾಧ್ಯತೆ ಇದೆ.










