ಹುಬ್ಬಳ್ಳಿ : ಕೊವಿಡ್ ನಿಂದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈಗಷ್ಟೇ ವ್ಯಾಪಾರ, ವ್ಯವಹಾರದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಹೀಗಾಗಿ ಜನರಿಗೆ ತೊಂದರೆ ಮಾಡಬಾರದು. ಬಂದ್ ನಿಂದ ಜನರಿಗೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ನಗರದಲ್ಲಿಂದು ಕೆಎಲ್ ಇ ಕಾಲೇಜಿನ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ್ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ ನಿಮ್ಮ ವೈಚಾರಿಕತೆಯ ಹಿನ್ನೆಲೆಯಲ್ಲಿ ಹೋರಾಟ ಮಾಡಿ ಎಂದರು.
ಭಾರತ ಬಂದ್ಗೆ ಕಾಂಗ್ರೆಸ್ ಬೆಂಬಲ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಅಧಿವೇಶನದಲ್ಲಿಯೂ ಹೇಳಿದ್ದೇನೆ. ಈಗಲೂ ಹೇಳುತ್ತಿದ್ದೇನೆ. ಕಾಂಗ್ರೆಸ್ ವಿಪಕ್ಷವಾಗಿ ಭಾರತ ಬಂದ್ಗೆ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದರು.










