ಮಂಗಳೂರು: ನಗರ ಪೊಲೀಸ್ ಕಮೀಷನರ್ ಆಗಿದ್ದ ಡಾ. ಪಿ ಎಸ್ ಹರ್ಷಾ ಅವರನ್ನು ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು, ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅವರನ್ನು ನೇಮಿಸಿದೆ. ಡಾ. ಪಿ ಎಸ್ ಹರ್ಷಾ ಅವರನ್ನು ಬೆಂಗಳೂರು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡಿಐಜಿಯಾಗಿ ನೇಮಕಗೊಳಿಸಿ ಆದೇಶ ನೀಡಲಾಗಿದೆ.










