ನವದೆಹಲಿ : ರಷ್ಯಾ ಈಗಾಗಲೇ ಉಕ್ರೇನ್ ಮೇಲೆ ಯುದ್ಧ ಸಾರಿದೆ. ಈ ಮಧ್ಯೆ ಉಕ್ರೇನ್ ರಾಯಭಾರಿ ಭಾರತದ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅಧ್ಯಕ್ಷರಾದ ವಾಡ್ಲಿಮಿರ್ ಪುಟೀನ್ ಜೊತೆ ಮಾತುಕತೆ ನಡೆಸಿ ಯುದ್ಧ ನಿಲ್ಲಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಉಕ್ರೇನ್ ರಾಯಭಾರಿ ಇಗೂರ್ ಪೋಲಿಖಾ, ರಷ್ಯಾ ಮತ್ತು ಭಾರತದ ನಡುವೆ ಉತ್ತಮ ಸಂಬಂಧವಿದ್ದು, ಮೋದಿಯವರು ರಷ್ಯಾ ಅಧ್ಯಕ್ಷರಾದ ಪುಟೀನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಬೇಕು. ಈ ಪ್ರಸ್ತುತ ಕ್ಷಣದಲ್ಲಿ, ನಾವು ಭಾರತದ ಬೆಂಬಲವನ್ನು ಕೇಳುತ್ತಿದ್ದೇವೆ ಮತ್ತು ಮನವಿ ಮಾಡುತ್ತಿದ್ದೇವೆ. ಪ್ರಜಾಸತ್ತಾತ್ಮಕ ರಾಜ್ಯದ ವಿರುದ್ಧ ನಿರಂಕುಶ ಪ್ರಭುತ್ವದ ಆಕ್ರಮಣದ ಈ ಸಂದರ್ಭದಲ್ಲಿ, ಭಾರತವು ತನ್ನ ಜಾಗತಿಕ ಪಾತ್ರವನ್ನು ಸಂಪೂರ್ಣವಾಗಿ ವಹಿಸಿಕೊಳ್ಳಬೇಕು. ಮೋದಿ ಜಿ ವಿಶ್ವದ ಅತ್ಯಂತ ಶಕ್ತಿಶಾಲಿ ಮತ್ತು ಗೌರವಾನ್ವಿತ ನಾಯಕರಲ್ಲಿ ಒಬ್ಬರು ಎಂದು ಹೇಳಿದ್ದಾರೆ.










