ಶಿವಮೊಗ್ಗ : 30 ಅಡಿ ಕಂದಕಕ್ಕೆ ಉರುಳಿದ ಕಾರು, ಮೂವರು ಗಂಭೀರ…

190
firstsuddi

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲ್ಲೂಕಿನ ಕಾರಣಗಿರಿ ಶರಾವತಿ ಸೇತುವೆ ಸಮೀಪ ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಬೈಕ್ ಸವಾರ ತಜಾಮುಲ್(21) ಎಂಬುವವರಿಗೆ ತೀವ್ರ ಗಾಯವಾಗಿದ್ದು, ಕಾರಿನಲ್ಲಿದ್ದ ಶ್ರೀಧರ್ ಹಾಗೂ ಶ್ರೀನಾಥ್ ಗಂಭೀರವಾಗಿ ಗಾಯಗೊಂಡಿದ್ದು, ವೇಗವಾಗಿ ಬಂದ ಪರಿಣಾಮ ನಿಲ್ಲಿಸಿದ ಬೈಕ್‍ಗೆ ಡಿಕ್ಕಿ ಹೊಡೆದು 30 ಅಡಿ ಆಳದ ಕಂದಕಕ್ಕೆ ಬಿದ್ದಿದ್ದು, ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.