ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಮತ ಚಲಾಯಿಸಿದ ಸಿಎಂ ಸಿದ್ದರಾಮಯ್ಯ.

39
firstsuddi

ಮೈಸೂರು: ಚಾಮರಾಜನಗರ ಲೋಕಸಭಾ ವ್ಯಾಪ್ತಿಯ, ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರವ್ಯಾಪ್ತಿಯ ಸಿದ್ದರಾಮನ ಹುಂಡಿ ಗ್ರಾಮದ ಮತಗಟ್ಟೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಮತ ಚಲಾಯಿಸಿದರು.

ಮೊದಲ ಹಂತದ ಮತದಾನ ರಾಜ್ಯದಲ್ಲಿ ನಡೆಯುತ್ತಿದೆ. ಮತದಾರರು ಸಂತಸದಿಂದಲೇ ಬೂತ್​ಗೆ ಆಗಮಿಸಿ ಹಕ್ಕು ಚಲಾಯಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಚಾಮರಾಜನಗರ ಲೋಕಸಭಾ ವ್ಯಾಪ್ತಿಗೆ ಬರುವ ಮೈಸೂರು ಜಿಲ್ಲೆ ವರುಣಾ ಕ್ಷೇತ್ರದ ಸಿದ್ದರಾಮನಹುಂಡಿ ಗ್ರಾಮದ ಮತಗಟ್ಟೆಯಲ್ಲಿ ಬೆಳಂಬೆಳಗ್ಗೆ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು. ಮತದಾನದ ಬಳಿಕ ಶಾಹಿ ಹಾಕಲಾದ ತಮ್ಮ ಬೆರಳನ್ನು ಕ್ಯಾಮರಾ ಮುಂದೆ ತೋರಿಸಿದರು. ಪುತ್ರ ಯತೀಂದ್ರ ಕೂಡ ಈ ವೇಳೆ ಹಾಜರಿದ್ದರು.

ವಿವಿಧ ಪಕ್ಷಗಳ ಅಭ್ಯರ್ಥಿಗಳು, ಗಣ್ಯರು ಮತಗಟ್ಟೆಗಳಲ್ಲಿ ವೋಟ್ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಬೇಕು ಎಂದು ಕೋರಿದರು. ಸಿನಿ ತಾರೆಯರು ಕೂಡ ಬೆಳಿಗ್ಗೆಯಿಂದಲೇ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಪ್ರಕಾಶ್ ರಾಜ್, ಸಪ್ತಮಿ ಗೌಡ, ಅಶ್ವಿನಿ ಪುನೀತ್ ರಾಜ್​​ಕುಮಾರ್, ರಾಘವೇಂದ್ರ ರಾಜ್​​ಕುಮಾರ್, ಅಮೂಲ್ಯ, ಸೇರಿದಂತೆ ಸೆಲೆಬ್ರಿಟಿಗಳಿಂದ ಮತದಾನ ನಡೆದಿದೆ.